“Book Descriptions: 'ಘಾಂದ್ರುಕ್' ನಮ್ಮಲ್ಲಿ ತೀವ್ರ ಆಸಕ್ತಿ ಹುಟ್ಟಿಸುವುದು ಅದರ ಭೌಗೋಳಿಕ ವಿಸ್ತಾರ ಮತ್ತು ಮಾನವೀಯ ಸಂಬಂಧಗಳ ಆಕರ್ಷಣೆಯಿಂದಾಗಿ. ನಮ್ಮ ದಕ್ಷಿಣ ಕನ್ನಡದಿಂದ ಹಿಡಿದು ಹಿಮಾಲಯದ ತಪ್ಪಲು,ನೇಪಾಳ ಅಲ್ಲಿನ ಘಾಂದ್ರುಕ್' ಎಂಬ ಹಳ್ಳಿ, ಅನ್ನಪೂರ್ಣ ಶಿಖರ, ಗಂಡಕಿ ನದಿ-ಹೀಗೆ ಪ್ರಕೃತಿ,ಸೃಷ್ಟಿ ಮತ್ತು ಮಾನವ ಬದುಕಿನ ಗತ,ಲಯಗಳು ಒಂದರೊಳಗೊಂದು ಬೆಸೆದುಕೊಂಡು ಅನಾವರಣಗೊಳ್ಳುವ ಈ ಕಾದಂಬರಿಯ ಕಥನದಲ್ಲಿ ಒಂದಕ್ಕಿಂತ ಹೆಚ್ಚು ಆಯಾಮಗಳಿವೆ.ಈ ಕಾದಂಬರಿಯ ಮೂಲ ಮೌಲ್ಯಗಳು, ಚಿಂತನೆ ಇರುವುದು ನೇಪಾಳವೂ ಸೇರಿದಂತೆ, ಭಾರತೀಯ ಸಂಸ್ಕೃತಿಯಲ್ಲೇ. ಇದಕ್ಕೆ ಆಧುನಿಕ ಯುಗದಲ್ಲಿ ಮೂಡಿರುವ ಆಯಾಮಗಳು ಈ ಬದುಕನ್ನು ಹೆಚ್ಚು ಸಂಕೀರ್ಣಗೊಳಿಸಿವೆ. ಚಿಂತನೆಯಲ್ಲಿ ಸ್ವಲ್ಪ ಗೊಂದಲ ಆರಾಜಕತೆಗಳಿಗೆಡೆ ಮಾಡಿಕೊಟ್ಟಿವೆ. ಹೊಸ ಆಯಾಮಗಳನ್ನೊಳಗೊಂಡ ವರ್ತಮಾನದ ಆಧುನಿಕ ಬದುಕಿನ ಶೋಧವೇ ಕಾದಂಬರಿಯ ಧ್ಯೇಯ ಉದ್ದೇಶಗಳು ಎಂದೇ ಇದನ್ನು ನವ್ಯೋತ್ತರ 'ನವ್ಯ' ಕಾದಂಬರಿ ಎಂದು ಕರೆಯಬಹುದೇನೋ. ವ್ಯಕ್ತಿಗತ ನೆಲೆಯಿಂದ ಸಾರ್ವತ್ರಿಕ ನೆಲೆಗೆ ಚಾಚಿಕೊಳ್ಳುವ ಈ ಕಾದಂಬರಿಯಲ್ಲಿ ಮುಖ್ಯವಾಗಿ ಈ ಕೆಲವು ಆಯಾಮಗಳನ್ನು ಗುರುತಿಸಬಹುದು. ವರ್ತಮಾನ ಕಾಲದ ಕಾರ್ಪೊರೆಟ್ ಜಗತ್ತು,ಪ್ರಕೃತಿ, ಸೃಷ್ಟಿ - ಬದುಕಿನ ಲಯ ಗತಿಗಳು, ಮಾನವ ಸಂಬಂಧಗಳು, ಧಾರ್ಮಿಕ ಜಿಜ್ಞಾಸೆ ಮತ್ತು ಜಾಗತಿಕ ಪರಿಸ್ಥಿತಿ.” DRIVE